Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿ ದೋಷಮುಕ್ತ.!!

ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು – ಎರಡನೇ ವಿಶೇಷ ಪೋಕೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ.

2023ರಜೂನ್ 23ರಂದು ಬಾಲಕಿಯನ್ನು ಆರೋಪಿ ಶಾಶ್ವತ್ ಹುಟ್ಟುಹಬ್ಬದ ನೆಪದಲ್ಲಿ ಬೆಳ್ತಂಗಡಿಯ ಮಡಂತ್ಯಾರಿನಲ್ಲಿರುವ – ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್‌ ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ಒಟ್ಟು 12 ಸಾಕ್ಷ್ಯಗಳನ್ನು ವಿಚಾರಣೆ ಮಾಡಿತ್ತು. ಈ ಪ್ರಕರಣದಲ್ಲಿ 24 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶ ಮನು ಕೆ.ಎಸ್‌. ಅವರು ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದಾರೆ. ಆರೋಪಿ ಪರ ಆದಾಯ ತೆರಿಗೆಯ ವಿಶೇಷ ಅಭಿಯೋಜಕರೂ ಆಗಿರುವ ಹಿರಿಯ ನ್ಯಾಯವಾದಿ ಹರ್ಷಕುಮಾರ್ ಅವರು ವಾದ ಮಂಡಿಸಿದ್ದರು.

Mangalore Additional District and Sessions Court and Second Special Pocso Additional Court have acquitted the accused of raping a girl near Madantyar in Belthangadi.

Related posts

Leave a Comment