Mangalore and Udupi news
Blog

ಬೆಳ್ತಂಗಡಿ : ಕಾರೊಂದರಲ್ಲಿ ಹಿಂಸಾತ್ಮಕವಾಗಿ ಗೋ ಸಾಗಾಟ : ಓರ್ವ ಅರೆಸ್ಟ್….!!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ

ಸಿಕ್ಕಿಬಿದ್ದವನ ಮೇಲೆ ಹಲ್ಲೆ ಮಾಡಲಾಗಿದೆ ತಿಳಿದು ಬಂದಿದೆ. ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಅಂಟಿಸಿರುವುದು ಕಂಡುಬಂದಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Comment