Mangalore and Udupi news
Blog

ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ..!

ಮಂಗಳೂರು ನಗರದ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಅಬ್ದುಲ್ ಲತೀಫ್ @ ಲತೀಫ್ ಪ್ರಾಯ 47 ವರ್ಷ ತಂದೆ : ಕುಂಜಿ ಅಬ್ದುಲ್ಲಾ ವಾಸ: ಮಂಡಿಯಾನ್ ಮನೆ, ಅರಿಕಾರ ಅಂಚೆ ಬಳಲಿ, ತಾಲ್ಲೂಕು : ವೆಲ್ಲರಿಕುಂಡು, ಜಿಲ್ಲೆ : ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.


ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ.ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Related posts

Leave a Comment