ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು ಗುರುತಿಸಲಾಗಿದೆ. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತಮ್ಮ ಇರ್ಫಾನ್ ಗೂ ಸಹ ಹೃದಯಾಘಾತವಾಗಿದೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಸಂಶುದ್ದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಟ್ಟರು. ವಿಚಾರ ತಿಳಿದು ಸಹೋದರ ಇರ್ಫಾನ್ ಅವರಿಗೂ ಹೃದಯಾಘಾತವಾಗಿದೆ. ತಕ್ಷಣವೇ ಸಂಬಂಧಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗಲಿಲ್ಲ. ಇಷ್ಟು ದಿನ ಜೊತೆಯಾಗಿ ಬೆಳೆದಿದ್ದ ಸಹೋದರರು ಇದೀಗ ಸಾವಿನಲ್ಲೂ ಒಂದಾಗಿದ್ದಾರೆ. ಸದ್ಯ ಇಬ್ಬರನ್ನು ಕಳೆದುಕೊಂಡಿರುವ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

previous post