Mangalore and Udupi news
Blog

ಉಜಿರೆ: ಬೈಕ್‌ ಗೆ ಅಡುಗೆ ಅನಿಲ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಸವಾರ ಗಂಭೀರ

ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ತೆರಳುತ್ತಿದ್ದ ಲಾರಿ ನಡುವೆ ಇಂದು ಸಂಜೆ ಅಪಘಾತ ಸಂಭವಿಸಿದೆ.

ಉಜಿರೆಯ ಹಳ್ಳಿಮನೆ ಸಮೀಪ ಈ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ದ್ವಿಚಕ್ರ ವಾಹನ ಸಂಪೂರ್ಣ ಹಾನಿಗೊಂಡಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Related posts

Leave a Comment