Mangalore and Udupi news
Blog

ಕಾರು ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – ಪುತ್ತೂರು ಬೀಟಿಗೆ ನಿವಾಸಿ ಶಂಶುದ್ದೀನ್ ಮೃತಪಟ್ಟ ಯುವಕ..

ಪುತ್ತೂರು :ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪುತ್ತೂರು ಬೀಟಿಗೆ ನಿವಾಸಿ ಸಂಶುದ್ದೀನ್ (32) ಮೃತಪಟ್ಟ ಯುವಕ. ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಇವರು, ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿಯಾಗಿದೆ.

ಕಾರು ಡಿಕ್ಕಿಯಾದ ಪರಿಣಾಮ ಸಂಶುದ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.

Related posts

Leave a Comment