Mangalore and Udupi news
Blog

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಐಇ-೫ ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ ಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸ್ಫೋಟಕ ಕಾಯಿದೆ ಮತ್ತು ನಿಯಮ ೨೦೦೮ ರ ಶೆಡ್ಯೂಲ್-Iಗಿ ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಪಡೆದು ಅಕ್ಟೋಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ೩೦೦ ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ೬೦೦ ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು.
ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾಪಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (೧೦೦ ರೂ.ಸ್ಟಾಂಪ್ ಪೇಪರ್), ಸರಕಾರ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.
ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರಗಳನ್ನು ಪ್ರಸ್ತಾವಿತ ಜಮೀನಿನ ನಕ್ಷೆ, ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.
ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿದೆ. ನಿಯಮಾವಳಿಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

Leave a Comment