Mangalore and Udupi news
Blog

ಮಂಗಳೂರು: ಹಸು ಕಳ್ಳತನ; ಮೂವರ ಬಂಧನ

ಮಂಗಳೂರು: ನಗರದ ತಜಿಪೋಡಿ ಮನೆ, ಅಡ್ಯಾ‌ರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪತ್ತೆ ಮಾಡಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಅಡ್ಯಾರ್, ಕಣ್ಣೂರು ನಿವಾಸಿ ಶಾಬಾಜ್ ಅಹಮ್ಮದ್, ಅರ್ಕುಳ ವಳಚ್ಚಿಲ್‌ ನಿವಾಸಿ ಮುಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ನಿವಾಸಿ ವಳಚ್ಚಿಲ್‌ ಖಾದ‌ರ್ ಮುಹಮ್ಮದ್ ಎಂದು ಗುರುತಿಸಲಾಗಿದೆ.

ಶಾಬಾಜ್ ಕಣ್ಣೂರು ಮತ್ತು ಸುಹಾನ್ ವಳಚ್ಚಿಲ್ ದನ ಕಳ್ಳತನ ಮಾಡಿ, ವಳಚ್ಚಿಲ್ ಖಾದರ್ ಗೆ ಮಾರಾಟ ಮಾಡಿದ್ದು, ಆತನು ಅದನ್ನು ಮಾಂಸ ಮಾಡಲು ಖರೀದಿಸಿದ್ದು, ದನವನ್ನು ರಕ್ಷಿಸಿ, ವಶಕ್ಕೆ ಪಡೆದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ದನ ಕಳ್ಳತನ ಮಾಡಿ ಅದನ್ನು ವಳಚ್ಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನಲೆಯಲ್ಲಿ ಜಾಗವನ್ನು ಜಪ್ತಿ ಮಾಡಿ, ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

Leave a Comment