Mangalore and Udupi news
Blog

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ : ಯುವಕ ಸ್ಥಳದಲ್ಲಿಯೇ ಮೃತ್ಯು…!!

ಕಾಪು: ಸೆಪ್ಟೆಂಬರ್ 22ರಂದು ಕಾಪುವಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 21 ವರ್ಷದ ಅನುಷ್ ಭಂಡಾರಿ ಸಾವನ್ನಪ್ಪಿದ್ದಾರೆ.

ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂತೆಕಟ್ಟೆ-ಕಲ್ಲಿಯನ್‌ಪುರ ನಿವಾಸಿ ಅನುಷ್ ತನ್ನ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅನುಷ್, ಆರು ತಿಂಗಳ ಹಿಂದೆಯಷ್ಟೇ ಉಡುಪಿಗೆ ಮರಳಿದ್ದರು. ಶವವನ್ನು ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related posts

Leave a Comment