Mangalore and Udupi news
Blog

ಅಳಿವೆ ಬಾಗಿಲಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ.

ಮನೋಹ‌ರ್ ಪುತ್ರನ್ (53) ಮೃ**ತ ದು**ರ್ದೈ*ವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃ*ತ ಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ..

ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳೀಯರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃ**ತ ದೇ**ಹವನ್ನು ಮೇಲಕ್ಕೆತ್ತಲಾಯಿತು..

ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

Related posts

Leave a Comment