Mangalore and Udupi news
Blog

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಕ್ಕೂರು ಮೈದಾನದ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಆರೋಪಿಗಳ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment