Mangalore and Udupi news
Blog

ಬಿ.ಸಿ. ರೋಡ್| ಇನ್ನೋವಾ ಕಾರು ಮುಖ್ಯ ವೃತ್ತಕ್ಕೆ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಬಂಟ್ವಾಳ : ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು , ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Related posts

Leave a Comment