Mangalore and Udupi news
Blog

ಮೂಡಬಿದಿರೆ ಟಾಟಾ ಏಸ್ ಕಂಟೇನರ್‌ನಲ್ಲಿ ಗೋಸಾಗಾಟ ಪತ್ತೆ : ಮೂವರ ಬಂಧನ…!!

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ಅಂಚಿನ ಹೊಸ್ಮಾರು- ನೆಲ್ಲಿಕಾರು ಬಳಿ ಟಾಟಾ ಏಸ್ ಕಂಟೇನರ್ ವಾಹನವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣದಲ್ಲಿ ಮನ್ಸೂರ್ ಅದ್ಯಪಾಡಿ, ಮೊಹಮ್ಮದ್ ಅಶ್ವದ್ ಮತ್ತು ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬ ಮೂವರು ಆರೋಪಿಗಳನ್ನು ಗುರುತಿಸಲಾಗಿದೆ.ಆರೋಪಿಗಳು ಕಾನೂನು ಉಲ್ಲಂಘಿಸಿ ಮೂರು ದನಗಳನ್ನು ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೊದಲ ಆರೋಪಿ ಮನ್ಸೂರ್ ಅದ್ಯಪಾಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ೨೯ ಪ್ರಕರಣಗಳು ದಾಖಲಾಗಿದ್ದು, ಇದು ಅವನ ೩೦ ನೇ ಪ್ರಕರಣವಾಗಿದೆ. ಎರಡನೇ ಆರೋಪಿ ಮೊಹಮ್ಮದ್ ಅಶ್ವದ್ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾನೂನಿನಡಿಯಲ್ಲಿ ಈ ಹಿಂದೆ ಒಂದು ಪ್ರಕರಣ ದಾಖಲಾಗಿದ್ದು, ಇದು ಅವನ ಎರಡನೇ ಪ್ರಕರಣವಾಗಿದೆ. ಮೂರನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ ವಿರುದ್ಧ, ಇದು ಮೊದಲ ಪ್ರಕರಣವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 178/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 111, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(1)(ಜ) ಮತ್ತು ಕರ್ನಾಟಕ ವಧೆ ತಡೆ ಮತ್ತು ದನ ಸಂರಕ್ಷಣಾ ಸುಗ್ರೀವಾಜ್ಞೆಯ ಸೆಕ್ಷನ್ 4,5,7, ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

Leave a Comment