Mangalore and Udupi news
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಬೈಕ್‌ಗೆ ಕಾರು ಡಿಕ್ಕಿ; RSS ಪ್ರಮುಖ್ ರಾಹುಲ್‌ ನಿಧನ.!!

ಹೆಬ್ರಿ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ.

ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತ ದುರ್ದೈವಿ.

ಶಿವಪುರ ಗ್ರಾಮದ ರಾಂಪುರ ಎನ್ನುವಲ್ಲಿ ಜನವರಿ 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಹೆಬ್ರಿ ಕಡೆ ಬರುತ್ತಿದ್ದ ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ರಾಹುಲ್‌ ಮೃತಪಟ್ಟಿದ್ದಾರೆ.

ಆರ್‌ಎಸ್‌ಎಸ್‌ ಪ್ರಮುಖ್‌ ಆಗಿದ್ದ ರಾಹುಲ್‌ ಜನವರಿ 4ರ ರಾತ್ರಿ ಮುಳ್ಳುಗುಡ್ಡೆ ಶಾಲೆಯಲ್ಲಿ ನಡೆದ ನಾಟಕವನ್ನು ನೋಡಿ ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್‌ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಎದುರಿನಿಂದ ಢಿಕ್ಕಿ ಹೊಡೆದಿತ್ತು. ಪರಿಣಾಮ ಮೋಟಾರ್‌ ಸೈಕಲ್‌ ಸವಾರ ರಸ್ತೆಗೆ ಬಿದ್ದಿದ್ದು, ಅವರಿಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಅವರನ್ನು ಸುರೇಶ ಅವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಫ‌ಲಕಾರಿಯಾಗಲಿಲ್ಲ.

Advertisement

Related posts

Leave a Comment