Mangalore and Udupi news
ಅಪರಾಧಪ್ರಸ್ತುತ

ಸೈಫ್ ಆಲಿ ಖಾನ್ ಮೇಲೆ ಹಲ್ಲೆ – ಉಡುಪಿಯ ದಯಾ ನಾಯಕ್ ತನಿಖೆಗೆ ಎಂಟ್ರಿ

Advertisement

ಬಾಲಿವುಡ್ ನಟ ಸೈಫ್ ಆಲಿ ಖಾನ್ ಮನೆಗೆ ರಾತ್ರೋರಾತ್ರಿ ನುಗ್ಗಿದ ಅಪರಿಚಿತ ವ್ಯಕ್ತಿಯೋರ್ವ ನಟನ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರವಾಗಿ ಸಾಗುತ್ತಿದೆ. ಹಲವು ಆಯಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Saif Ali Khan attack update: First photo of the intruder out, attacker identified on CCTV

ಈ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ವಿಶೇಷ ತಂಡ ನಡೆಸಿ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿಯಲ್ಲಿ ಸಿಕ್ಕಿರುವ ಆರೋಪಿಯ ಜಾಡು ಹಿಡಿದು ತನಿಖಾಧಿಕಾರಿಗಳು ಹೊರಟಿದ್ದಾರೆ. ವಿಶೇಷ ಅಂದ್ರೆ ಸೈಫ್ ಅಲಿ ಖಾನ್ ನಿವಾಸಕ್ಕೆ ಎನ್ ಕೌಂಟರ್ ಸ್ಪೆಷಲಿಸ್ಟ್, ಕರ್ನಾಟಕ ಮೂಲದ ದಯಾ ನಾಯಕ್ ಎಂಟ್ರಿ ಕೊಟ್ಟಿದ್ದಾಗಿ ರಾಷ್ಟಿçÃಯ ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿದೆ.

Saif Ali Khan Attacked: हमलावर को पकड़ने के लिए मुंबई पुलिस ने बनाई 20 टीमें, सैफ पर हमले के बाद करीना का पहला बयान आया | Saif Ali Khan knife Attack Live

ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ದಯಾ ನಾಯಕ್ ಕರ್ನಾಟಕದ ಉಡುಪಿಯವರು. ಕೊಂಕಣಿ ಕುಟುಂಬದಲ್ಲಿ ಜನಿಸಿದ ದಯಾ ನಾಯಕ್, ಬಡ್ಡ ಮತ್ತು ರಾಧಾ ನಾಯಕ್ ದಂಪತಿಯ ಕಿರಿಯ ಪುತ್ರ.

Who is Daya Nayak? Mumbai's encounter specialist visits Saif Ali Khan's Bandra home after attack | Trending - Hindustan Times

1995ರಲ್ಲಿ ಪೊಲೀಸ್ ಅಕಾಡೆಮಿಯಿಂದ ಪದವಿ ಪಡೆದ ನಂತರ ಜುಹು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಕಗೊಂಡರು. ಆ ಸಮಯದಲ್ಲಿ ಮುಂಬೈನಲ್ಲಿ ಭೂಗತ ಜಗತ್ತು ಉತ್ತಂಗದಲ್ಲಿತ್ತು. 1996 ರಲ್ಲಿ ಮುಂಬೈನ ಜುಹುದಲ್ಲಿ ಇಬ್ಬರು ಛೋಟಾ ರಾಜನ್ ಸಹಚರರನ್ನು ಎನ್‌ಕೌಂಟರ್ ಮಾಡುವ ಮೂಲಕ ದಯಾ ನಾಯಕ್ ಮುನ್ನಲೆಗೆ ಬಂದರು. ಮುಂದಿನ ದಿನಗಳಲ್ಲಿ ದರೋಡೆಕೋರರಿಗೆ, ರೌಡಿಗಳಿಗೆ ದುಸ್ವಪ್ನವಾಗಿ ಕಾಡಿದ್ದರು.

Mumbai police shunts out encounter specialist Daya Nayak, other key officers - Mumbai News | India Today

ಮಹಾರಾಷ್ಟ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಆಗಿರುವ ದಯಾ ನಾಯಕ್ ಅವರ ರಿಯಲ್? ಎನ್‌ಕೌಂಟರ್ ಕಥೆಗಳು ಸಿನಿಮಾ ಆಗಿ ತೆರೆ ಮೇಲೆ ಬಂದಿದೆ. ಮುಂಬೈ ದರೋಡೆಕೋರರ ಹುಟ್ಟಡಗಿಸಿದ ಖ್ಯಾತಿ ಇವರದ್ದು. 1990ರ ದಶಕದಲ್ಲಿ 80ಕ್ಕೂ ಹೆಚ್ಚು ಭೂಗತ ದರೋಡೆಕೋರರ ಫಿನಿಶ್ ಮಾಡಿದ್ದಾರೆ. 

Related posts

Leave a Comment