
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಿವಾಸಿ 68 ವರ್ಷದ ರಾಜಗೋಪಾಲ್ ಕಾರಂತ್ ಎಂಬವರು ನೀಡಿದ ದೂರಿನ ಪ್ರಕಾರ, ಅವರು ತಮ್ಮ ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್ಗೆ ಖಾಸಗಿ ಕುಟುಂಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಫೆಬ್ರವರಿ 1 ರಂದು ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್ನಿಂದ ಕೆಎಸ್ಆರ್ಟಿಸಿ ಬಸ್ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸನಲ್ಲಿ ಇಟ್ಟುಕೊಂಡು ಅದರ ಜೊತೆಯಲ್ಲಿ 3000 ರೂ ಹಣವನ್ನು ತಮ್ಮ ಲಗೇಜು ಬ್ಯಾಗ್ ನಲ್ಲಿರಿಸಿ ಹೊರಟಿದ್ದಾರೆ.
ಪ್ರಯಾಣದ ವೇಳೆ, ಕುಣಿಗಲ್ ಬಳಿ ಬಸ್ ನಿಂತಾಗ, ಅವರ ಹೆಂಡತಿ ಮತ್ತು ಅಳಿಯ ಸದ್ರಿ ಚಿನ್ನಾಭರಣ ಹಾಗೂ ನಗದು ಹಣವಿದ್ದ ಬ್ಯಾಗುಗಳನ್ನು ಬಸ್ಸಿನಲ್ಲಿಯೇ ಇಟ್ಟು ಶೌಚಾಲಯಕ್ಕೆ ಹೋಗಿದ್ದರೆ. ಫೆಬ್ರವರಿ 2 ರಂದು ಕಾರಿಂಜಾ ಕ್ರಾಸ್ ತಲುಪಿದಾಗ, ಅವರು ತಮ್ಮ ಬ್ಯಾಗ್ ತೆರೆದಾಗ 144 ಗ್ರಾಂ ಚಿನ್ನ ಮತ್ತು ನಗದು ನಾಪತ್ತೆಯಾಗಿರುವುದನ್ನು ಪತ್ತೆ ಮಾಡಿದರು.
ಬಸ್ಸಿನ ಒಳಗೆ ಅಥವಾ ಕುಣಿಗಲ್ನ ಹೋಟೆಲ್ ಬಳಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತಪಡಿಸಿ ರಾಜಗೋಪಾಲ್ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಐಪಿಸಿ ಕಲಂ 303(2) ಮತ್ತು 305(ಬಿ) (ಬಿಎನ್ಎಸ್) ಅಡಿಯಲ್ಲಿ ಪ್ರಕರಣ ಸಂಖ್ಯೆ 09/ ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.