Mangalore and Udupi news
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಭೀಕರ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವಕನು ಸಾವು.!!

ಬಂಟ್ವಾಳ : ಭೀಕರ ಅಪಘಾತದಲ್ಲಿ ಇಬ್ಬರು ಆತ್ಮೀಯ ಸ್ನೇಹಿತರು ಬಲಿಯಾದ ಘಟನೆ ಬಂಟ್ವಾಳದ ಕಡೆಗೋಳಿ ನಡೆದಿದೆ.

ನ.03 ಭಾನುವಾರ ಸೆಲಿನಾ ಬಸ್ ಅತಿವೇಗವಾಗಿ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸದ್ಯ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಕಡೆಗೋಳಿ ನಿವಾಸಿ ಪ್ರವೀಣ್ ಹಾಗೂ ಸಂದೀಪ್ ಮೃತ ದುರ್ದೈವಿಗಳು. ಇವರು ಇಬ್ಬರು ಚಿಕ್ಕ ವಯಸ್ಸಿನಿಂದಲೇ ಆತ್ಮೀಯ ಗೆಳೆಯರು. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಇಬ್ಬರು ಆತ್ಮೀಯ ಸ್ನೇಹಿತರು ಬಲಿಯಾಗಿದ್ದಾರೆ.

ಜೀವ ತೆಗೆಯುವ ಖಾಸಗಿ ಬಸ್ ಗಳು: ಸ್ಥಳೀಯರ ಆಕ್ರೋಶ:

ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಸಿ.ಸಿ.ಬಸ್ ಗಳು ಅನೇಕ ಅಮಾಯಕರ ಬಲಿ ತೆಗೆದುಕೊಂಡಿದೆ. ಇಂದು ಅಪಘಾತಕ್ಕೆ ಕಾರಣವಾದ ಸೆಲಿನ ಬಸ್ ಸಹಿತ ಅನೇಕ ಖಾಸಗಿ ಬಸ್ ಗಳು ಎಲ್ಲೆ ಮೀರಿ ಸಂಚಾರ ಮಾಡುತ್ತಿದ್ದು, ಇವರ ಮೇಲೆ ಹಿಡಿತ ಸಾಧಿಸುವ ಆರ್.ಟಿ.ಒ.ಇಲಾಖೆ ಹಾಗೂ ಟ್ರಾಫಿಕ್ ಪೋಲೀಸರು ಮೌನಮುರಿದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತೀ ವೇಗದಿಂದ ಮತ್ತು ಅಜಾಗರೂಕತೆಯಿಂದ ಸಂಚಾರ ಮಾಡುವ ಖಾಸಗಿ ಬಸ್ ಗಳ ಮೇಲೆ ಇಲಾಖೆಗಳು ಹಿಡಿತ ಸಾಧಿಸದಿದ್ದರೆ ಇನ್ನೆಷ್ಟು ಬಲಿಯಾಗಲಿದೆಯೊ ಗೊತ್ತಿಲ್ಲ.

Related posts

Leave a Comment