Mangalore and Udupi news
ಅಪರಾಧರಾಜ್ಯ

ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ? ಕಂಡಕ್ಟರ್​​ ಮೇಲೆ ಹಲ್ಲೆ

Advertisement

ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ ಹೆಚ್ಚಿಸಿದ್ದೀರಿ” ಅಂತ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ. ವಿಜಯನಗರ ಜಿಲ್ಲೆಯ ನಿವಾಸಿ ಶ್ರೀಧರ್​ ಹಲ್ಲೆ ಮಾಡಿದ ವ್ಯಕ್ತಿ. ಮಂಗಳವಾರ (ಫೆ.26) ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್ ಅನ್ನು ಶ್ರೀಧರ್ ಕುಡಿದ ಮತ್ತಿನಲ್ಲಿ ಹುಲಗಿಯಲ್ಲಿ ಹತ್ತಿದ್ದಾನೆ. ಬಳಿಕ, ಶ್ರೀಧರ್​ ಗಂಗಾವತಿ ತಾಲೂಕಿನ ಹನುಮನಹಳ್ಳಿಗೆ ಹೋಗಬೇಕು ಅಂತ ಹೇಳಿದ್ದರಿಂದ ಆತನಿಗೆ ನಿರ್ವಾಹಕ ಹನುಮಪ್ಪ 30 ರೂಪಾಯಿ ಟಿಕೆಟ್ ನೀಡಿದ್ದಾರೆ.

ಈ ಮೊದಲು ಹುಲಗಿಯಿಂದ ಗಂಗಾವತಿಗೆ 26 ರೂಪಾಯಿ ಇತ್ತು, ಇದೀಗ 30 ರೂಪಾಯಿ ಟಿಕೆಟ್ ಯಾಕೆ ಅಂತ ಕೇಳಿದ್ದಾನೆ. ಬಸ್ ದರ ಹೆಚ್ಚಳವಾಗಿದೆ ಅಂತ ನಿರ್ವಾಹಕ ಹೇಳಿದ್ದಾರೆ. ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ? ಅಂತ ನಿರ್ವಾಹಕ ಹನುಮಂತಪ್ಪ ಅವರ ಜೊತೆ ಶ್ರೀಧರ್ ಜಗಳ ಆರಂಭಿಸಿದ್ದಾನೆ. ಈ ವೇಳೆ ನಿರ್ವಾಹಕ ಹನುಮಂತಪ್ಪರಿಗೆ ಶ್ರೀಧರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಬಳಿ ಬಸ್ ನಿಲ್ಲಿಸಿದಾಗ ಶ್ರೀಧರ್ ನಿರ್ವಾಹಕ ಹನುಮಂತರನ್ನು ಎಳೆದುಕೊಂಡು ಕೆಳಗೆ ಇಳಿದ್ದಾನೆ. ಬಳಿಕ ಕೈಗೆ ಸಿಕ್ಕ ಕಲ್ಲಿನಿಂದ ಹನಮಪ್ಪರ ಮೇಲೆ ಹಲ್ಲೆ ಮಾಡಿದ್ದಾನೆ.

ಘಟನೆಯಲ್ಲಿ ಹನಮಪ್ಪನ ಬಲಗಣ್ಣು ಮತ್ತು ಹಣೆಗೆ ತೀರ್ವ ಪೆಟ್ಟು ಬಿದ್ದಿದೆ. ರಕ್ತಸ್ರಾವವಾಗಿದ್ದರಿಂದ ಕೂಡಲೇ ಹನುಮಪ್ಪನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಹನುಮಪ್ಪ ಆರೋಪಿ‌ ಶ್ರೀಧರ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಶ್ರೀಧರ್​ನನ್ನು ವಶಕ್ಕೆ ಪಡೆದಿದ್ದಾರೆ.

ಬಸ್ ಟಿಕೆಟ್ ವಿಚಾರವಾಗಿ ಬೆಳಗಾವಿಯಲ್ಲಿ ನಿರ್ವಾಹಕನ ಮೇಲೆ ಘಟನೆ ಮಾಸುವ ಮುನ್ನವೇ ಕುಡಿತ ಮತ್ತಿನಲ್ಲಿ ಪ್ರಯಾಣಿಕ ಹನುಮಪ್ಪನ ಮೇಲೆ ಹಲ್ಲೆ ಮಾಡಿರುವುದನ್ನು ಸಾರಿಗೆ ಸಂಸ್ಥೆ ಸಿಬ್ಬಂದಿ ಖಂಡಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

Related posts

Leave a Comment