
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ.
35 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕೊಲೆ ಮಾಡಿರುವ ಶಾಕಿಂಗ್ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಆರೋಪಿಯು ತನ್ನ ಹೆಂಡತಿಯ ದೇಹವನ್ನು ತುಂಡರಿಸಿ ಪ್ರೆಶರ್ ಕುಕ್ಕರ್ನಲ್ಲಿ ಬೇಯಿಸಿದ್ದಾಗಿ ಹೇಳಿಕೊಂಡಿದ್ದಾನೆ. ಆರೋಪಿ ನೀಡಿದ ಹೇಳಿಕೆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇಹದ ಭಾಗಗಳನ್ನು ಕುದಿಸಿದ ನಂತರ ಕೆರೆಯಲ್ಲಿ ಎಸೆದಿರುವುದಾಗಿ ಬಂಧಿತ ಆರೋಪಿ ತಿಳಿಸಿದ್ದಾನೆ.
ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ನಿವೃತ್ತ ಯೋಧ ಗುರುಮೂರ್ತಿ ಕೊಲೆ ಮಾಡಿದ ಆರೋಪಿ.
ವಾರದ ಹಿಂದೆ ಮಹಿಳೆ ನಾಪತ್ತೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ರಕ್ಷಣಾ ಇಲಾಖೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ನಿವೃತ್ತ ಸೈನಿಕನೊಬ್ಬ ಇಂತಾ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಜ.15 ರಂದು ತನ್ನ ಪತ್ನಿಯನ್ನು ಕೊಂದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಪ್ರೆಶರ್ ಕುಕ್ಕರ್ನಲ್ಲಿ ಕುದಿಸಿ ಮತ್ತು ಮೂಳೆಗಳನ್ನು ರುಬ್ಬಲು ಪೆಸ್ಟಲ್ ಬಳಸಿ ಅಪರಾಧವನ್ನು ಮುಚ್ಚಿಡಲು ಯತ್ನಿಸಿದ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆ ಪುಟ್ಟವೆಂಕಟ ಮಾಧವಿ ಜನವರಿ 18 ರಂದು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬದವರು ಶಂಕಿತ ಗುರುಮೂರ್ತಿಯನ್ನು ಪ್ರಶ್ನಿಸಿದ್ದಾರೆ. ಮಾಧವಿಯ ಪೋಷಕರು ಮೀರ್ಪೇಟ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದಕ್ಕಾಗಿ ತನ್ನೊಂದಿಗೆ ಜಗಳವಾಡಿದ ನಂತರ ಅವಳು ತೊರೆದಿದ್ದಾಳೆ ಎಂದು ಗಂಡ ಹೇಳಿಕೊಂಡಿದ್ದಾನೆ.
ಕೆಲವು ವರ್ಷಗಳಿಂದ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಈ ನಡುವೆ ಮಾಧವಿ ಪೋಷಕರು ಗುರುಮೂರ್ತಿ ಕರೆ ಮಾಡಿ ವಿಚಾರಿಸಿದಾಗ ಆಕೆ ಮನೆಬಿಟ್ಟು ಹೋಗಿದ್ದಾಳೆ ಎಂದಿದ್ದಾನೆ. ಕೆಲವು ದಿನಗಳಲ್ಲಿ ವಾಪಾಸ್ ಬರದೆ ಇದ್ದಾಗ , ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕಂಪ್ಲೆಟ್ ಕೊಟ್ಟಿದ್ದಾರೆ. ಈ ವೇಳೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹತ್ತಿರದ ಪೊಲೀಸ್ ಠಾಣೆಗೆ ಮಾಧವಿ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ ಜೊತೆಗೆ ವೆಂಕಟೇಶ್ವರ ಕಾಲನಿಗೆ ಬಂದು ಮಾಧವಿ ವಾಸವಿದ್ದ ಮನೆಗೆ ಬಂದು ಪತಿ ಹಾಗೂ ಮಕ್ಕಳ ಬಳಿ ಮಾಹಿತಿ ಕಲೆ ಹಾಕಿದ್ದಾರೆ, ಎಲ್ಲ ಕಡೆ ಬಾವಿ, ನದಿ, ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಎಲ್ಲಾದರೂ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆಯೂ ತನಿಖೆ ನಡೆಸಿದ್ದಾರೆ.
ಆದರೆ ಎಲ್ಲೂ ಒಂದು ಸುಳಿವೂ ಸಿಗಲಿಲ್ಲ ಇದರ ನಡುವೆ ಪತಿ ಗುರುಮೂರ್ತಿ ಮೇಲೆ ಪೊಲೀಸರು ಒಂದು ಕಣ್ಣಿಟ್ಟಿದ್ದರು ಆತನ ನಡವಳಿಕೆ ಮೇಲೆ ಅನುಮಾನಗೊಂಡ ಪೊಲೀಸರು ಆತನನ್ನು ಮತ್ತೆ ವಿಚಾರಣೆ ನಡೆಸಲು ಠಾಣೆಗೆ ಕರೆಸಿದ್ದಾರೆ ಈ ವೇಳೆ ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ ಗುರುಮೂರ್ತಿ ಗೆ ಪೊಲೀಸರ ದಾಟಿಯಲ್ಲೇ ವಿಚಾರಣೆ ನಡೆಸಿದ್ದಾರೆ, ಈ ವೇಳೆ ತನ್ನ ಕೃತ್ಯವನ್ನು ವಿವರಿಸಿದ್ದಾನೆ ಇದನ್ನು ಕೇಳಿದ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ.
ಈ ವೇಳೆ ತಾನು ಹೆಂಡತಿಯನ್ನು ಕೊಂದು ಬಾತ್ರೂಮ್ ನಲ್ಲಿ ದೇಹವನ್ನು ಕತ್ತರಿಸಿ ಕುಕ್ಕರ್ ನಲ್ಲಿ ಅದನ್ನು ಬೇಯಿಸಿದ್ದೇನೆ , ಬಳಿಕ ಅದನ್ನು ಒಣಗಿಸಿ ಪುಡಿ ಮಾಡಿ ಮೂರು ದಿನಗಳ ಕಾಲ ಮಾಂಸ ಮತ್ತು ಮೂಳೆಗಳನ್ನು ಪ್ಯಾಕ್ ಮಾಡಿ ಮೀರಪೇಟ್ ಸರೋವರಕ್ಕೆ ಎಸೆದಿದ್ದಾನೆ ಎಂದು ತಿಳಿಸಿದ್ದಾನೆ. ಈ ಕೃತ್ಯ ಎಸಗುವ ಮೊದಲು ಯೂ ಟ್ಯೂಬ್ ಮೂಲಕ ಯಾವ ರೀತಿ ಹತ್ಯೆ ನಡೆಸ ಬಹುದು ಅಲ್ಲದೆ ಕುರುಹುಗಳನ್ನು ನಾಶಮಾಡುವುದು ಎಲ್ಲವನ್ನು ಯೂ ಟ್ಯೂಬ್ ಮೂಲಕ ನೋಡಿ ಕಲಿತುಕೊಂಡೆ ಎಂದು ಆರೋಪಿ ಗುರುಮೂರ್ತಿ ಹೇಳಿದ್ದಾರೆ.