ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ತುಳು ಚಲನಚಿತ್ರ “ಮೀರಾ” ಫೆಬ್ರವರಿ 21 ರಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರತಂಡ ಜನವರಿ 29ರಂದು “ಮೀರಾ ಮಿಟ್ಸ್ ಮೀಡಿಯಾ” ಕಾರ್ಯಕ್ರಮ ನಡೆದಿದ್ದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
“ಮೀರಾ” ಈ ಚಿತ್ರವನ್ನು ಲಂಚುಲಾಲ್ ಕೆ ಎಸ್ ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗುವ ನಿರೀಕ್ಷೆಯಿದೆ. ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ.
“ಮೀರಾ ಮಿಟ್ಸ್ ಮೀಡಿಯಾ” ಕಾರ್ಯಕ್ರಮ ಮಂಗಳೂರಿನ ಸಾಯಿರಾಧ ಪ್ಯಾಲೆಸ್ ನಲ್ಲಿ ವಿಭಿನ್ನ ರೀತಿಯಲ್ಲಿ ಆಯೋಜನೆ ಮಾಡಿದ್ದರು. ಎಲ್ಲಾ ಪತ್ರಿಕಾ, ಮಾಧ್ಯಮ ಮಿತ್ರರು ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲ್ಯೂಎನ್ಸರ್ ಗಳ ಸಮ್ಮಖದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. “ಮೀರಾ” ಚಿತ್ರದ ಟೀಸರ್ ರಿಲೀಸ್ ಹಾಗೂ ಮೂಕ ಪ್ರಾಣಿಗಳ ಆಶ್ರಯದಾತೆ ರಜನಿ ಶೆಟ್ಟಿ ಇವರಿಗೆ ಗೌರವರ್ಪಣೆ ನಡೆಯಿತು.
ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವೋರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್ ಮುಂತಾದ ಹೆಸರಾಂತ ಕಲಾವಿದರ ಜತೆ ಮುಂಬೈ ಮೂಲದ ತುಳು ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.
ರಜನಿ ಶೆಟ್ಟಿ ಇವರಿಗೆ ಗೌರವರ್ಪಣೆ:
ಸ್ವಾರ್ಥ ತುಂಬಿದ ಲೋಕದಲ್ಲಿ ಜನರು ಇನ್ನೊಬ್ಬರ ಕಷ್ಟಕ್ಕೆ ಮಿಡಿಯದ ಈ ಕಾಲದಲ್ಲಿ ರಜನಿ ಶೆಟ್ಟಿ ಹಲವು ವರ್ಷಗಳಿಂದ ಮೂಕ ಪ್ರಾಣಿಗಳಿಗೆ ತಾಯಿಯಾಗಿದ್ದಾರೆ. ಕಷ್ಟದಲ್ಲಿ ಸಿಲುಕಿರುವ ಪ್ರಾಣಿ ಪಕ್ಷಿಗಳನ್ನು ತನ್ನ ಪ್ರಾಣವನ್ನು ಲೆಕ್ಕಿಸದೆ ರಕ್ಷಿಸುವ ರಜನಿ ಶೆಟ್ಟಿ ಅವರನ್ನು ಗುರುತಿಸಿ ಮೀರಾ ಚಿತ್ರತಂಡ ಗೌರವಿಸಿ ಅವರ ಒಂದು ತಿಂಗಳಿನ ಸಂಪೂರ್ಣ ಖರ್ಚುವೆಚ್ಚವನ್ನು ವಹಿಸಿಕೊಂಡಿದ್ದಾರೆ ಇದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಟೀಸರ್ ರಿಲೀಸ್:
ಪತ್ರಿಕಾ, ಮಾಧ್ಯಮ ಮಿತ್ರರು ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲ್ಯೂಎನ್ಸರ್ ಗಳ ಸಮ್ಮಖದಲ್ಲಿ ಮೀರಾ ಚಿತೆ ಟೀಸರ್ ಬಿಡುಗಡೆ ಮಾಡಿದ್ದಾರೆ. ತನ್ನ ಕನಸುಗಳನ್ನು ನನಸಾಗಿಸುವ ಪಯಣದಲ್ಲಿ ಸಮಾಜದಿಂದ ಸವಾಲುಗಳನ್ನು ಎದುರಿಸುವ ಯುವತಿಯ ಕಥೆಯನ್ನು ಈ ಚಿತ್ರ ಹೇಳುತ್ತದೆ. ಈ ಚಲನಚಿತ್ರವು ಮಹಿಳೆಯರಿಗೆ ಅವರ ಕನಸನ್ನು ಜಯಿಸಲು ಮತ್ತು ಸಾಧಿಸಲು ಸ್ಫೂರ್ತಿ ನೀಡುತ್ತದೆ. ಮಂಗಳೂರು, ಕಟೀಲು, ಕಾಸರಗೋಡು, ಸೀತಾಂಗೋಳಿ, ಕುಂಬಳೆ ಮತ್ತು ಕರಾವಳಿ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡ “ಮೀರಾ” ತುಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ಆಗಲಿದ್ದು, ಉತ್ತಮ ಕಥೆ, ಅಭಿನಯ ಮತ್ತು ಸಾಮಾಜಿಕ ಸಂದೇಶದೊAದಿಗೆ ಫೆಬ್ರವರಿ 21 ರಂದು ಬಿಡುಗಡೆಯಾಗಲಿದೆ.
ಮೀರಾ ಚಲನಚಿತ್ರದ ಡಿಒಪಿ ಅಜಯ್ ಕೆ.ಎಸ್. ಸಂಕಲನ ಜಾಬಿನ್ಸ್ ಸಬಾಸ್ಟಿಯನ್ ನಿರ್ವಹಿಸುತ್ತಿದ್ದು, ಸಂಗೀತ ಸಂಯೋಜನೆ ರೆನ್ನು ಜಯಪ್ರಕಾಶ್, ಗೀತೆ ರಚನೆ ಜಯಪ್ರಕಾಶ್ ಕಳೇರಿ ನಿರ್ವಹಿಸುತ್ತಿದ್ದಾರೆ. ಮಲಯಾಳಂ ಸಿನೆಮಾ ಭ್ರಮಯುಗಂ ಖ್ಯಾತಿಯ ಲಿಜು ಪ್ರಭಾಕರ್ ಚಿತ್ರದ ಡಿ.ಐ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ. ಎಸ್.ಎಫ್.ಎಕ್ಸ್ ಮತ್ತು ಅಂತಿಮ ಮಿಶ್ರಣವನ್ನು ಯುನಿಟಿ ಸ್ಟುಡಿಯೋಸ್ ನಿರ್ವಹಿಸಿದ್ದು, ಜಿತಿನ್ ಕುಂಬ್ಳೆ ಸಹಾಯಕ ನಿರ್ದೇಶಕರಾಗಿ, ಜಯ ಸುವರ್ಣ ಮೇಕಪ್ ಹಾಗೂ ಪಿ.ಆರ್.ಒ ಆಗಿ ಬಾಳ ಜಗನ್ನಾಥ ಶೆಟ್ಟಿ ಉಸ್ತುವಾರಿ ವಹಿಸಿದ್ದಾರೆ. ಈ ಚಿತ್ರದಲ್ಲಿ 5 ಹಾಡುಗಳಿದ್ದು ದಕ್ಷಿಣ ಭಾರತ ಹೆಸರಾಂತ ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣ ಸೇರಿದಂತೆ ಹೆಸರಾಂತ ಗಾಯಕರ ಧ್ವನಿಯಲ್ಲಿ ಮೂಡಿ ಬಂದಿದೆ. ತುಳು ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ ಎಐ ತಂತ್ರಜ್ಞಾನದಲ್ಲಿ ಸ್ವರ ತಯಾರಿಸಿ ಹಾಡು ಕೂಡ ಈ ಚಿತ್ರದಲ್ಲಿ ಇದೆ.