Mangalore and Udupi news
ಪ್ರಸ್ತುತರಾಜ್ಯ

ಚಿಕ್ಕಮಗಳೂರಲ್ಲಿ 6 ನಕ್ಸಲರ ಶರಣಾಗತಿ; ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ಏನೇನು?

ಪಶ್ಚಿಮಘಟ್ಟ ಹಾಗೂ ಮಲೆನಾಡಿನಲ್ಲಿ ಅಡಗಿದ್ದ 6 ಮಂದಿ ನಕ್ಸಲರು ಶರಣಾಗತಿ ಬಯಸಿ ನಾಗರಿಕ ಸಮಿತಿಗೆ ಪತ್ರ ಬರೆದಿದ್ದಾರೆ. ನಕ್ಸಲ್ ನಾಯಕ ವಿಕ್ರಂ ಗೌಡನ ಎನ್​ಕೌಂಟರ್​​ನಿಂದ ಕಾಡಲ್ಲಿದ್ದ ನಕ್ಸಲರ ಸದ್ದಡಗಿದೆ.

ಬಹುತೇಕ ಕಾಫಿನಾಡಿನ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಿದೆ. ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್ಪಿ ವಿಕ್ರಮ ಅಮಟೆ ಮುಂದೆ ಶರಣಾಗಲಿದ್ದಾರೆ. ಇನ್ನು ಇವರು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಸರ್ಕಾರಕ್ಕೆ ನಕ್ಸಲರ ಬೇಡಿಕೆಗಳು

  1. ಸಮಾಜದ ಮುಖ್ಯವಾಹಿನಿಗೆ ಬಂದ ನಕ್ಸಲರ ಆತ್ಮಗೌರವಕ್ಕೆ ಧಕ್ಕೆಯಾಗಬಾರದು.
  2. ಪ್ರಜಾತಾಂತ್ರಿಕ ಹೋರಾಟಕ್ಕೆ ಯಾವುದೇ ತೊಡಕಾರಬಾರದು.
  3. ಸಂಬಂಧ ಇಲ್ಲದಿದ್ದರೂ ಹೆಸರು ಇರುವ ಪ್ರಕರಣದಿಂದ ಕೈಬಿಡಬೇಕು.
  4. ಬೇಗ ಜಾಮೀನಿನ ಬರಲು ಸಹಕರಿಸಬೇಕು.
  5. ವಿಶೇಷ ನ್ಯಾಯಾಲಯದಲ್ಲಿ ಮೊಕದ್ದಮೆ ಇತ್ಯರ್ಥಕ್ಕೆ ಸಹಕರಿಸಬೇಕು.
  6. ಕೌಶಲ ತರಬೇತಿಗೆ ಸಹಕಾರ ನೀಡಬೇಕು, ಕೊಟ್ಟ ಮಾತು ಉಳಿಸಿಕೊಳ್ಳಬೇಕು.
  7. ಸರ್ಕಾರಗಳು ನಕ್ಸಲರ ಬಗ್ಗೆ ಅನುಕಂಪದಿಂದ ವರ್ತಿಸಬೇಕು.
  8. ಈ ಹಿಂದೆ ಸಮಾಜದ ಮುಖ್ಯವಾಹಿನಿಗೆ ಬಂದಿರುವ ಎಲ್ಲಾ ನಕ್ಸಲರಿಗೂ ಮಾತು ಕೊಟ್ಟ ಸರ್ಕಾರ ಎಲ್ಲಾ ಸೌಲಭ್ಯಗಳನ್ನ ನೀಡಬೇಕು.
  9. ಸಮಾಜದ ಮುಖ್ಯವಾಹಿನಿಗೆ ಬಂದ ನಂತರ ಗೌರವದಿಂದ ನೋಡಬೇಕು.
  10. ಪ್ರಜಾತಾಂತ್ರಿಕ ವ್ಯವಸ್ಥೆಯ ಹೋರಾಟದಲ್ಲಿರುವಾಗ ಅನುಮಾನದಿಂದ ನೋಡುವಂತಾಗಬಾರದು. 

Related posts

Leave a Comment