ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಸದ್ಯ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ.
ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪ್ರೀತಂ ಅವರು ಡಿ.13 ಶುಕ್ರವಾರ ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಆಟವಾಡುತ್ತಿರುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಅಷ್ಟರಲ್ಲೆ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಪ್ರತಿಭಾನ್ವಿತ ಪ್ರೀತಂ ಅವರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಹಂತಹoತವಾಗಿ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಪಡೆದಿದ್ದರು. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.