Mangalore and Udupi news
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸ್ಕೂಟರ್-ಟೆಂಪೋ ಡಿಕ್ಕಿ – ಯುವಕ ಮೃತ್ಯು.!!

ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ.

ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕರ್ ಸಿದ್ದೀಕ್(22) ಅಪಘಾತದಲ್ಲಿ ಮೃತಪಟ್ಟ ಯುವಕ.

ಕೊಣಾಜೆ | ಸ್ಕೂಟರ್- ಟೆಂಪೊ ಮಧ್ಯೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಸ್ಕೂಟರ್ ನಲ್ಲಿ ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಅಬೂಬಕರ್ ಸಿದ್ದೀಕ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೋ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೋದೊಳಗೆ ನುಗ್ಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಟೆಂಪೋ ಚಾಲಕ ಕೂಡಾ ಗಾಯಗೊಂಡಿದ್ದಾರೆ. ಅಪಘಾತದ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Related posts

Leave a Comment