
ಮಂಗಳೂರು : ಚರ್ಚ್ ಗೆ ನುಗ್ಗಿದ ಕಳ್ಳನೋರ್ವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವುಗೈದ ಘಟನೆ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ನಲ್ಲಿ ನಡೆದಿದೆ.
ಜ.24ರಂದು ರಾತ್ರಿ ಕಳ್ಳ ಚರ್ಚ್ ನ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳ ತಲೆಗೆ ಬಟ್ಟೆ ಕಟ್ಟಿದ್ದರೆ, ಮುಖಕ್ಕೆ ಮಾಸ್ಕ್ ಧರಿಸಿದ್ದ. ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಚರ್ಚ್ ನ ಪದಾಧಿಕಾರಿಗಳು ಪೊಲೀಸರ ಗಮನಕ್ಕೆ ತಂದಿದ್ದಾರೆ. ಕಳ್ಳತನದ ದೃಶ್ಯಾವಳಿ ಚರ್ಚಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪೊಲೀಸರರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ ಹಾಗೂ ಸಿಸಿಟಿವಿಯ ಫೂಟೆಜ್ ಆಧಾರದಲ್ಲಿ ಕಳ್ಳನ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.