Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮರದ ದಿಮ್ಮಿ ಸಾಗಾಟ – 6 ಲಕ್ಷದ ಸೊತ್ತು ವಶಕ್ಕೆ.!!

Advertisement

ಮಂಗಳೂರು : ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳ ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಿದೆ.

ಬೈಕಂಪಾಡಿಯಲ್ಲಿ ವಿವಿಧ ಜಾತಿಯ 61ದಿಮ್ಮಿಗಳನ್ನು ಸೇರಿ ಒಟ್ಟು 6 ಲಕ್ಷ ರೂ. ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿದ್ದಾರೆ. ಪ್ರಕರಣದಲ್ಲಿ ಮುತ್ತಪ್ಪ ಬಿನ್ ಯಲ್ಲಪ್ಪ ಹೊಸಮನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್, ಶಿವಾನಂದ ಸದೇಪ ಮಾದರ, ಮಂಜುನಾಥ, ವಾಹನ ಚಾಲಕ ಜಯಪ್ರಕಾಶ್ ಭಾಗವಹಿಸಿದ್ದರು. ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಶ್ರೀಕಾಂತ್ ಎಂ. ಮಾರ್ಗದರ್ಶನದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Related posts

Leave a Comment