Mangalore and Udupi news
ಪ್ರಸ್ತುತರಾಜ್ಯ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ

Advertisement

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ, ಹಸಿರುಕ್ರಾಂತಿಯ ನಾಯಕಿ ತುಳಸಿ ಗೌಡ ಅವರು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ - Kannada News | PM Modi meets Padma awardees amid campaign, pays tributes to ...

ತುಳಸಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರ ಕಾಳಜಿ ಹೊಂದಿದ್ದ ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ನಿವಾಸಿ. ಹೊನ್ನಳ್ಳಿ ಗ್ರಾಮದ ನಾರಾಯಣ ಮತ್ತು ನೀಲಿ ದಂಪತಿಯ ಪುತ್ರಿಯಾಗಿರುವ ತುಳಸಿ ಗೌಡ 1944ರಲ್ಲಿ ಜನಿಸಿದರು.

Tulsi Gowda ಅವರಿಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ | udayavani

ಸಾಲು ಸಾಲು ಗಿಡ ನೆಟ್ಟು ಪೋಷಿಸಿ ಬೆಳಸಿದ್ದರು. ಪರಿಸರ ಕಾಳಜಿ‌ ಹಿನ್ನಲೆ 2020 ರಲ್ಲಿ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದರು. ತುಳಸಿ ಗೌಡ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದ ತುಳಸಿ ಗೌಡ ಅವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ತುಳಸಿ ಗೌಡ ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾದವರು.

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಇನ್ನಿಲ್ಲ.! | Janamitra

ಕಳೆದ 6 ದಶಕಗಳಿಂದ ಯುವ ತಲೆಮಾರಿಗೆ ಮಾರ್ಗದರ್ಶನ, ತರಬೇತಿ ನೀಡುತ್ತಿದ್ದ ತುಳಸಿ ಗೌಡ, ಅರಣ್ಯ ಇಲಾಖೆ ನಡೆಸಿದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಸೇವೆಯನ್ನು ಗುರುತಿಸಿ, ಇಲಾಖೆ ಅವರ ಸೇವೆಯನ್ನು ಕ್ರಮಬದ್ಧಗೊಳಿಸಿತ್ತು. 14 ವರ್ಷಗಳ ನಂತರ ಅವರು ಸೇವೆಯಿಂದ ನಿವೃತ್ತರಾಗಿದ್ದು, ನಂತರ ಪಿಂಚಣಿ ಪಡೆದು ಜೀವನ ಸಾಗಿಸುತ್ತಿದ್ದರು.

Tulsi Gowda is no more ಪರಿಸರ ಪ್ರೇಮಿ ತುಳಸಿ ಗೌಡ ಇನ್ನಿಲ್ಲ

Related posts

Leave a Comment