Mangalore and Udupi news
ಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಉಡುಪಿ: ವಿಷದ ಹಾವು ಕಡಿತಕ್ಕೆ ಕೃಷಿಕ ಬಲಿ.!!

Advertisement

ಉಡುಪಿ : ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ.

ಉಡುಪಿ | ವಿಷದ ಹಾವು ಕಡಿತ: ಕೃಷಿಕ ಮೃತ್ಯು

ಡಿ.14 ಶನಿವಾರ ಸಂಜೆ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇವರು ಕೃಷಿ ಕಾರ್ಯಗಳಲ್ಲಿ ಮತ್ತು ಕೃಷಿ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

Leave a Comment